spot_img
Saturday, April 11, 2026
spot_img

ಜೆಇಇ ಮೈನ್ಸ್  ಪರೀಕ್ಷೆಯಲ್ಲಿ ಹೆಮ್ಮಾಡಿಯ ಜನತಾ ಪಿಯು ಕಾಲೇಜು- ಬೈಂದೂರು ಕುಂದಾಪುರ ತಾಲ್ಲೂಕಿನಲ್ಲಿ ಅಗ್ರಶ್ರೇಣಿ

ಹೆಮ್ಮಾಡಿ: ಕೇಂದ್ರ ಸರಕಾರದ ಎನ್ ಟಿ ಎ ಪ್ರಾಧಿಕಾರವು ನಡೆಸುವ ರಾಷ್ಟ್ರ ಮಟ್ಟದ ಜೆಇಇ ಮೈನ್ಸ್  2026ರ  ಪರೀಕ್ಷೆಯಲ್ಲಿ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿಗಳು  ಬೈಂದೂರು, ಕುಂದಾಪುರ ತಾಲ್ಲೂಕಿನಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿಗಳಾದ ಧೀರಜ್ ಜಿ.ಡಿ 99.3604 ಪರ್ಸಂಟೈಲ್,ಮಾನ್ಯ ಪೂಜಾರಿ 98.6832 ಪರ್ಸಂಟೈಲ್ ,ಶ್ರೇಯಸ್ ಪಿ ಗಾಣಿಗ 98.4693 ಪರ್ಸಂಟೈಲ್, ಶ್ರೀರಾಮ್ ಪಿ ಭಟ್ 97.4402ಪರ್ಸಂಟೈಲ್,ಶ್ರೀಧಾನ್ ಎಂ ಶೆಟ್ಟಿ 97.5834ಪರ್ಸಂಟೈಲ್, ನಹುಷ್ ಚಂದ್ರ ಬಿಲ್ಲವ 96.1127,ಆಯುಷ್  ಯು ಮೆಂಡನ್ 96.1817 ಪರ್ಸಂಟೈಲ್ಅಂಕಗಳಿಸಿ ಸಾಧನೆ ಮೆರೆದಿದ್ದಾರೆ.
ಗ್ರಾಮೀಣ ಭಾಗವಾದ ಹೆಮ್ಮಾಡಿ, ಬೈಂದೂರು, ಕುಂದಾಪುರದ  ಅನೇಕ ವಿದ್ಯಾರ್ಥಿಗಳು  ಜೆಇಇ ಮೈನ್ಸ್ ಪರೀಕ್ಷೆಗೆ ತರಬೇತಿ ಪಡೆಯಲು ದೂರದ ಕಾರ್ಕಳ, ಮಂಗಳೂರಿಗೆ ತೆರಳಬೇಕಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಕುಂದಾಪುರ ಭಾಗದ ಪ್ರತಿಷ್ಠಿತ ಸಂಸ್ಥೆಯಾದ ಜನತಾ ಪಿಯು ಕಾಲೇಜಿನಲ್ಲಿ ನುರಿತ ಉಪನ್ಯಾಸಕರ ಸತತ ಮಾರ್ಗದರ್ಶನದಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲೂ ಇಂತಹ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯುತ್ತೇವೆ ಎಂಬ ಆತ್ಮವಿಶ್ವಾಸವನ್ನು ಜನತಾ ವಿದ್ಯಾಸಂಸ್ಥೆ  ಮೂಡಿಸಿದೆ

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!