spot_img
Thursday, June 4, 2026
spot_img

ದೇಶಪ್ರೇಮಿಗೆ ಉಸಿರಿಗಿಂತ ದೇಶದೊಡ್ಡದು :ಡಾ.ಸುಧಾಕರ್ ಶೆಟ್ಟಿ : ಸೇನೆಗೆ ಒಂದು ಲಕ್ಷರೂಪಾಯಿ ಹಸ್ತಾಂತರದ ಮೂಲಕ ಮಾಲಿಕೆ ಪ್ರಾರಂಭ

ಶಿಕ್ಷಣದ ಜೊತೆಗೆ ದೇಶಭಕ್ತಿಯನ್ನು ನಮ್ಮ ವ್ಯಕ್ತಿತ್ವದೊಂದಿಗೆ ಜೋಡಿಸಿಕೊಂಡಾಗ ರಾಷ್ಟ್ರಮೊದಲು ಎಂಬ ಭಾವ ನಮ್ಮೊಳಗೆ ಮೊಳಗಲು ಸಾಧ್ಯವಿದೆಎಂದುಕರ್ನಾಟಕ ವಿಧಾನ ಪರಿಷತ್‌ನಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು.
ಅವರು ಅಜೆಕಾರಿನ ಪದ್ಮನಗರದ ಅಜೆಕಾರು ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆ ಹಾಗೂ ಅಜೆಕಾರ್ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಅರ್ಪಿಸುವ ತಿಂಗಳ ಸರಣಿ ಮಾಲಿಕೆ ‘ದೇಶಸುಧಾ’ವನ್ನು ಭಾರತೀಯ ಸೇನೆಗೆ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ವತಿಯಿಂದ ಒಂದು ಲಕ್ಷ ರೂಪಾಯಿಯನ್ನು ಸಂಸ್ಥೆಯ ಎನ್.ಸಿ.ಸಿ ಲೆ. ಮಂಜುನಾಥ್ ಮುದೂರು ಅವರಿಗೆ ಹಸ್ತಾಂತರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ದೇಶಸುಧಾದ ಮೊದಲ ಮಾಲಿಕೆಯಲ್ಲಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ರವರು‘ಬಾಗಲಕೋಟೆಯ ರಂಗಪ್ಪ ಆಲೂರರ ದೇಶಪ್ರೇಮ’ ಎಂಬ ವಿಷಯದ ಕುರಿತಂತೆ ಸಂಪನ್ಮೂಲ ವ್ಯಕ್ತಿಯಾಗಿ ರಂಗಪ್ಪ ಆಲೂರ ಯಶೋಗಾಥೆಯನ್ನು ಪ್ರಸ್ತುತಪಡಿಸಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರು ದೇಶಸುಧಾದ ಮಾರ್ಗದರ್ಶಕರು ಆಗಿರುವ ಡಾ.ಸುಧಾಕರ್ ಶೆಟ್ಟಿಯವರು ಮಾತನಾಡಿ, ದೇಶಕ್ಕಾಗಿ ಹಗಲಿರುಳೆನ್ನದೆ ಶ್ರಮಿಸುತ್ತಿರುವ ವೀರಯೋಧರ ತ್ಯಾಗ ಸ್ಮರಣೀಯ. ದೇಶಪ್ರೇಮಿಗೆ ಉಸಿರಿಗಿಂತ ದೇಶದೊಡ್ಡದು. ಮುಂದಿನ ಪ್ರಜೆಗಳಾದ ಇಂದಿನ ಮಕ್ಕಳಿಗೆ ರಾಷ್ಟ್ರಭಕ್ತಿಯ ಚೇತನವನ್ನು ಪ್ರೇರಣೆ ನೀಡಬೇಕೆನ್ನುವುದು ನಮ್ಮ ಆಶಯವಾಗಿದೆ.ವಿದ್ಯಾರ್ಥಿಗಳು ದೇಶಪ್ರೇಮಿಯಾಗಿ ಬೆಳೆಯುವಂತೆ ಮಾಡುವುದು ಶಿಕ್ಷಣ ಸಂಸ್ಥೆಗಳ ಕರ್ತವ್ಯವಾಗಿರುತ್ತದೆ.ಇದಕ್ಕೆ ಜ್ಞಾನಸುಧಾ ಸದಾ ಬದ್ಧವಾಗಿದೆಎಂದು ನುಡಿದರು.
ಕಾರ್ಕಳ ಜ್ಞಾನಸುಧಾದಲ್ಲಿಯೂ ಸಂಸ್ಕೃತಿ, ಸಂಸ್ಕಾರ, ಸದ್ವಿಚಾರದ ಆಶಯದಡಿ ಪ್ರಸ್ತುತಗೊಳ್ಳುತ್ತಿರುವ ತಿಂಗಳ ಸರಣಿಮಾಲಿಕೆ ಮೌಲ್ಯಸುಧಾತನ್ನ ಸುವರ್ಣ ಸಂಚಿಕೆಯ ಹೊಸ್ತಿಲಿಗೆ ಕಾಲಿಟ್ಟಿರುವುದನ್ನುಇಲ್ಲಿ ಸ್ಮರಿಸಿಕೊಳ್ಳ ಬಹುದು.
ಕಾರ್ಯಕ್ರಮದಲ್ಲಿ ಟ್ರಸ್ಟಿಗಳಾದ  ಅನಿಲ್ ಕುಮಾರ್‌ಜೈನ್, ಸಿ.ಎ ನಿತ್ಯಾನಂದ ಪ್ರಭು, ವಿದ್ಯಾವತಿ ಎಸ್ ಶೆಟ್ಟಿ ಹಾಗೂ ಡಾ.ಗಗನ್‌ಎಸ್ ಶೆಟ್ಟಿ, ಆಡಳಿತ ಮಂಡಳಿ ಸದಸ್ಯರಾದ ಶಾಂತಿರಾಜ್ ಹೆಗ್ಡೆ,ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು, ಉಪಪ್ರಾಂಶುಪಾಲರುಗಳು ಸಹಿತ ಬೊಧಕ ಬೋಧಕೇತರ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.ಆಂಗ್ಲಭಾಷಾ ಉಪನ್ಯಾಸಕಿ ಕು.ದರ್ಶಿನಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!