spot_img
Saturday, June 6, 2026
spot_img

ಶಿರೂರು ಜ್ಞಾನದ ಶೈಕ್ಷಣಿಕ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ |ಪರಿಸರ ಕಾಳಜಿ ಅತೀ ಅಗತ್ಯ-ಡಾ. ರವಿದಾಸ್ ಶೆಟ್ಟಿ

ಶಿರೂರು: ಇಂದಿನ ಪ್ರಚಲಿತ ಕಾಲಘಟ್ಟದಲ್ಲಿ ಪರಿಸರ ಉಳಿದರೆ ಮನುಕುಲದ ಉಳಿವು, ಪ್ರಕೃತಿ ವಿನಾಶದತ್ತ ಸಾಗಿದರೆ ಮನುಕುಲದ ರಕ್ಷಣೆ ಅಸಾಧ್ಯ, ಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ ಇದನ್ನು ನಮಗೆಲ್ಲ ನೆನಪಿಸುವ ದಿನವೇ ವಿಶ್ವ ಪರಿಸರ ದಿನ ಪರಿಸರ ಸಂರಕ್ಷಣೆಗೆ ನಾವು ಸ್ವಯಂ ಪ್ರೇರಿತರಾಗಿ ಗಿಡ ನೆಟ್ಟು ನೀರು ಹಾಕಿ ಅವುಗಳನ್ನು ಬೆಳೆಸಿ ನಮ್ಮ ತಾಯಿಯಂತೆ ಆರೈಕೆ ಮಾಡಬೇಕು ಪರಿಸರದ ಮೌಲ್ಯಗಳನ್ನು ಎಲ್ಲರೂ ಅರಿತುಕೊಂಡು ಮಲೀನ ಮಾಡದಂತೆ ಸಂರಕ್ಷಣೆ ಮಾಡುವತ್ತ ಶ್ರಮವಹಿಸಬೇಕು ಎಂದು ಜ್ಞಾನದಾ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ಡಾ. ರವಿದಾಸ್ ಶೆಟ್ಟಿ ಹೇಳಿದರು.

ಜ್ಞಾನದ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಸಾಂಕೇತಿಕವಾಗಿ ಗಿಡ ನೆಡುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪ್ರಣೀತಾ ವಿಶ್ವ ಪರಿಸರ ದಿನಾಚರಣೆ ಕುರಿತು ಮನೋಜ್ಞವಾಗಿ ಮಾತನಾಡಿ ಇಂದಿನ ದಿನಗಳಲ್ಲಿ ಪರಿಸರ ನಾಶವಾಗುತ್ತಿದ್ದು ಇದರ ಪರಿಣಾಮವಾಗಿ ಕಾಲಕಾಲಕ್ಕೆ ಮಳೆಯಿಲ್ಲದೆ ರೈತರಿಗೆ ಬೆಳೆ ಬೆಳೆಯಲು ಸಾಧ್ಯವಾಗುತ್ತಿಲ್ಲ ಕೃಷಿಕರು ಕೃಷಿಯಿಂದ ವಂಚಿತರಾಗುತ್ತಿದ್ದಾರೆ ಹೀಗಾಗಿ ಇಂದಿನ ದಿನಗಳಲ್ಲಿ ಪರಿಸರ ಉಳಿಸುವ ಹೊಣೆ ನಮ್ಮದಾಗಿದ್ದು ಶಾಲಾ ಹಂತದಲ್ಲಿ ಪರಿಸರ ಪ್ರೀತಿ ಬೆಳೆಸಿಕೊಂಡು ಶಿಕ್ಷಣದ ಜೊತೆಗೆ ಪರಿಸರದ ಕಾಳಜಿ ರೂಡಿಸಿಕೊಂಡರೆ ಹಸಿರು ಕರ್ನಾಟಕದ ಕನಸು ನನಸಾಗುತ್ತದೆ ಎಂದರು ಕಾರ್ಯಕ್ರಮದಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಜೆ ಸಿ ಐ ಶಿರೂರು ಇದರ ಪದಾಧಿಕಾರಿಗಳು ಶಾಲೆಗೆ ಗಿಡಗಳನ್ನು ವಿತರಿಸಿದರು. ವಿದ್ಯಾರ್ಥಿಗಳಾದ ಕುಮಾರಿ ಮೇಘನಾ ಸ್ವಾಗತಿಸಿ ಕುಮಾರಿ ಧನ್ವಿ ವಂದಿಸಿದರು ಹಾಗೂ ಕುಮಾರಿ ಅಂಜಲಿ ಕಾರ್ಯಕ್ರಮ ನಿರೂಪಿಸಿದರು

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!