spot_img
Friday, July 24, 2026
spot_img

ಮಣಿಪಾಲ ಜ್ಞಾನಸುಧಾದಲ್ಲಿ ಉಡುಪಿ ಜಿಲ್ಲೆಯ ರಾಷ್ಟ್ರಮಟ್ಟದ ಕ್ರೀಡಾಸಾಧಕರಿಗೆ ಸನ್ಮಾನ

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ ಸ್ಪೂರ್ತಿಯಾಗಿರುತ್ತದೆ. ದೈಹಿಕ ಶಿಕ್ಷಣ ಉಪನ್ಯಾಸಕರು ಈ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು ಹಾಗೂ ಕ್ರೀಡಾ ಸಾಧಕರು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧಿಸುವಂತಾಗಬೇಕು ಎಂದು ಅಜೆಕಾರು ಪದ್ಮಗೋಪಾಲ ಎಜ್ಯುಕೇಷನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ.ಸುಧಾಕರಶೆಟ್ಟಿ ಶುಭ ಹಾರೈಸಿದರು. ಇವರು ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು ವಿದ್ಯಾನಗರದಲ್ಲಿ, ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ವತಿಯಿಂದ ನಡೆದ ರಾಷ್ಟ್ರೀಯ ಪಂದ್ಯಾಟ ಮತ್ತು ಕ್ರೀಡಾಕೂಟದಲ್ಲಿ ಭಾಗವಹಿಸಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ವಿಭಾಗದ ಉಪ ನಿರ್ದೇಶಕರಾದ ರವೀಂದ್ರ ಉಪಾಧ್ಯ ಇವರು ಮುಂದೆ ಬರುವ ಕ್ರೀಡಾಕೂಟಗಳಿಗೆ ಇಲಾಖೆಯ ಸಂಪೂರ್ಣ ಬೆಂಬಲವಿರುವುದು ಎಂದು ಅಧ್ಯಕ್ಷೀಯ ನುಡಿಗಳನ್ನಾಡಿದರು.
ರಾಷ್ಟ್ರೀಯ ಪಂದ್ಯಾಟ ಮತ್ತು ಕ್ರೀಡಾಕೂಟದಲ್ಲಿ ಭಾಗವಹಿಸಿದ ಸಾಧಕರಿಗೆ ಮತ್ತು ತರಬೇತುದಾರರಿಗೆ ಸನ್ಮಾನಿಸಲಾಯಿತು. ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವವಿಭಾಗದ ನಿವೃತ್ತ ಉಪನಿರ್ದೇಶಕರಾದ ಮಾರುತಿ ಹಾಗೂ ಮಂಗಳೂರು ಉತ್ತರದ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಜೀವನ್‌ಕುಮಾರ್ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪ.ಪೂ.ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಮಂಜುನಾಥ ಭಟ್, ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪ.ಪೂ.ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ದಯಾನಂದ ಪೈ, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿ.ಇ.ಒ ದಿನೇಶ್ ಎಮ್ ಕೊಡವೂರು, ಮಣಿಪಾಲ ಜ್ಞಾನಸುಧಾ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ಗಣೇಶ್‌ಶೆಟ್ಟಿ, ಉಡುಪಿ ಜಿಲ್ಲಾ ಪ.ಪೂ.ಕಾಲೇಜುಗಳ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಸತೀಶ್‌ಹೆಗ್ಡೆ ಶಾನಾಡಿ, ಕ್ರೀಡಾ ಸಂಯೋಜಕರಾದ ದಿನೇಶ್‌ಕುಮಾರ್ ಎ, ಕಾರ್ಯದರ್ಶಿ ಸುಕೇಶ್ ಶೆಟ್ಟಿ ಉಪಸ್ಥಿತರಿದ್ದರು.
ಮಣಿಪಾಲ ಜ್ಞಾನಸುಧಾ ಪ.ಪೂ.ಕಾಲೇಜಿನ ಆಂಗ್ಲಭಾಷಾ ಉಪನ್ಯಾಸಕಿ ಶಮಿತ ಹಾಗೂ ಅಮೃತಭಾರತಿ ಕಾಲೇಜಿನ ವಿಜಯ್‌ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!