spot_img
Wednesday, March 25, 2026
spot_img

ಮಾರಣಕಟ್ಟೆಯಲ್ಲಿ ಕಲ್ಪವೃಕ್ಷ ಕಾರ್ಯಕ್ರಮದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ, ನೆರವು ವಿತರಣೆ


ಕುಂದಾಪುರ: ಮಾರಣಕಟ್ಟೆ ಸುಬ್ರಹ್ಮಣ್ಯ ಮಂಜ ಚಾರಿಟೇಬಲ್ ಟ್ರಸ್ಟ್ ಮಾರಣಕಟ್ಟೆ ಇವರ ವತಿಯಿಂದ ಮಾರಣಕಟ್ಟೆ ದಿ|ಸುಬ್ರಹ್ಮಣ್ಯ ಮಂಜರವರ ಸಂಸ್ಮರಣಾ ಕಾರ್ಯಕ್ರಮ ಕಲ್ಪವೃಕ್ಷ ಎ.16 ಶುಕ್ರವಾರ ಮಾರಣಕಟ್ಟೆಯ ಅನುಗ್ರಹದ ವಠಾರದಲ್ಲಿ ನಡೆಯಿತು.


ದಿ|ಸುಬ್ರಹ್ಮಣ್ಯ ಮಂಜರವರ ನೆನಪಿನಲ್ಲಿ ನೆರವು ಕಾರ್ಯಕ್ರಮವನ್ನು ಮಾತೃಶ್ರೀ ವಿಶಾಲಾಕ್ಷಿಯಮ್ಮನವರು ಉದ್ಘಾಟಿಸಿದರು.

ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ನೆರವೇರಿಸಿದ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿಯವರು, ತನ್ನ ದುಡಿಮೆಯ ಒಂದು ಭಾಗವನ್ನು ಸಮಾಜಕ್ಕೆ ಅರ್ಪಣಭಾವದಿಂದ ನೀಡುವ ಕೃಷ್ಣಮೂರ್ತಿ ಮಂಜರು ಶಿಕ್ಷಣ, ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ವ್ಯವಸ್ಥೆಗೆ ಅಗಾಧವಾದ ಕೊಡುಗೆ ನೀಡುತ್ತಲೇ ಬಂದಿದ್ದಾರೆ. ಸದಾ ಸಮಾಜಕ್ಕೆ ಸ್ಪಂದಿಸುವ ಇವರು ಮಾರಣಕಟ್ಟೆ ಸುಬ್ರಹ್ಮಣ್ಯ ಮಂಜ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೀಡುತ್ತಿರುವ ಕಾರ್ಯಗಳು ಶ್ಲಾಘನೀಯ ಎಂದರು.


ಯಕ್ಷಿ ಪಾತ್ರಿಗಳಾದ ಶ್ರೀಧರ ಮರ್ಡಿ ಆಶೀರ್ವಚನ ನೀಡಿದರು.
ಎಂ.ಎಸ್.ಮಂಜ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷರಾದ ಎಂ.ಕೃಷ್ಣಮೂರ್ತಿ ಮಂಜರು ಅಧ್ಯಕ್ಷತೆ ವಹಿಸಿದ್ದರು. ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಬಿ.ಅಪ್ಪಣ್ಣ ಹೆಗ್ಡೆ, ಮಾರಣಕಟ್ಟೆ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಸದಾಶಿವ ಶೆಟ್ಟಿ, ಮಾಜಿ ಆಡಳಿತ ಮೊಕ್ತೇಸರ ಚಿತ್ತೂರು ಮಂಜಯ್ಯ ಶೆಟ್ಟಿ, ನಾರಾಯಣ ಮಂಜರು, ಶ್ರೀಧರ ಮಂಜರು ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಸೇವಾ ರತ್ನ ಪ್ರಶಸ್ತಿಯನ್ನು ವರಸಿದ್ಧಿ ವಿನಾಯಕ ಪ.ಪೂ ಕಾಲೇಜು ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕೆರಾಡಿ ಇವರಿಗೆ, ಕಲಾ ರತ್ನ ಪ್ರಶಸ್ತಿಯನ್ನು ಯಕ್ಷಗಾನ ಕಲಾವಿದ ಜಮದಗ್ನಿ ಶೀನ ಇವರಿಗೆ, ಅಮೂಲ್ಯ ರತ್ನ ಪ್ರಶಸ್ತಿಯನ್ನು ಪಾಕಶಾಸ್ತ್ರ ಪ್ರವೀಣ ಮಂಜುನಾಥ ಹೆಬ್ಬಾರ್ ನೀರ್‌ಕೊಡ್ಲು, ಕರ್ಕುಂಜೆ ಇವರಿಗೆ ಪ್ರದಾನ ಮಾಡಲಾಯಿತು.


ಶ್ರೀಧರ ಮಂಜರು ಸ್ವಾಗತಿಸಿದರು. ಶಿಕ್ಷಕ ಬಾಲಕೃಷ್ಣ ಶೆಟ್ಟಿ ನೆರವು ಫಲಾನುಭವಿಗಳ ಪಟ್ಟಿ ವಾಚಿಸಿದರು. ವಿಘ್ನೇಶ್ವರ ಮಂಜರು ವಂದಿಸಿದರು. ಪತ್ರಕರ್ತ ಪ್ರಭಾಕರ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು. ಚಿತ್ರಕೂಟ ನೃತ್ಯತಂಡ ಚಿತ್ತೂರು ಇವರ ನಿರ್ದೇಶನದಲ್ಲಿ ಭರತನಾಟ್ಯ, ಬಳಿಕ ಭಾಗವತ ಜನ್ಸಾಲೆ ರಾಘವೇಂದ್ರ ಆಚಾರ್ಯರ ನಿರ್ದೇಶನದಲ್ಲಿ ‘ಚಂದ್ರಾವಳಿ ವಿಲಾಸ’ ಯಕ್ಷಗಾನ ಪ್ರದರ್ಶನಗೊಂಡಿತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!