spot_img
Monday, March 23, 2026
spot_img

ಬ್ಲಾಕ್ ಫಂಗಸ್: ಔಷಧಿ ಶೋಧನೆಗೆ ಕನ್ನಡಿಗ ಬಾಂಡ್ಯ ಶ್ರೀಕಾಂತ ಪೈ ನೇತೃತ್ವ


ಕುಂದಾಪುರ: ಕೋವಿಡ್ 2ನೇ ಅಲೆಯಲ್ಲಿ ತತ್ತರಿಸುವ ದೇಶವಾಸಿಗಳನ್ನು ಇನ್ನಿಲದಂತೆ ಕಾಡುತ್ತಿರುವ ಬ್ಲಾಕ್ ಫಂಗಸ್ (ಕಪ್ಪು ಶೀಲಿಂದ್ರ) ಕಾಯಿಲೆಯನ್ನು ವಾಸಿ ಮಾಡಲು ಬಳಸುತ್ತಿರುವ ಔಷಧಿಗಳಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿರುವುದು ಲಿಪೊಸೊಮನ್ ಆಂಪೊಟೆರಿಸಿನ್ ಬಿ ಎನ್ನುವ ಔಷಧಿ.


ಈ ಔಷಧಿಯನ್ನು ಕಂಡು ಹಿಡಿಯಲು ಶ್ರಮ ಪಟ್ಟಿರುವ ಭಾರತ ಸೀರಮ್ಸ್ ಎಂಡ್ ವ್ಯಾಕ್ಸಿನ್ಸ್ ಲಿಮಿಟೆಡ್ ಕಂಪೆನಿಯ ಸಂಶೋಧಕ ತಂಡದ ನೇತೃತ್ವ ವಹಿಸಿದವರು ಕರಾವಳಿಯ ಕನ್ನಡಿಗರಾದ ಬಾಂಡ್ಯ ಶ್ರೀಕಾಂತ ಪೈ. ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಗಂಗೊಳ್ಳಿ ಮೂಲದ ಬಾಂಡ್ಯ ಶ್ರೀಕಾಂತ ಪೈ, ಗಂಗೊಳ್ಳಿ ಹಾಗೂ ಕುಂದಾಪುರದಲ್ಲಿ ಪ್ರೌಢ ಹಾಗೂ ಪಿಯುಸಿ ಶಿಕ್ಷಣವನ್ನು ಮುಗಿಸಿ, ಬೆಂಗಳೂರಿನಲ್ಲಿ 1975ರಲ್ಲಿ ಬಿ. ಫಾರ್ಮ ಮತ್ತು ಮಣಿಪಾಲದಲ್ಲಿ 1977ರಲ್ಲಿ ಎಂ.ಫಾರ್ಮ ಶಿಕ್ಷಣ ಪಡೆದುಕೊಂಡು, ಉದ್ಯೋಗಕ್ಕಾಗಿ ಮುಂಬೈನಲ್ಲಿರುವ ಭಾರತ್ ಸೀರಮ್ಸ್ ಎಂಡ್ ವ್ಯಾಕ್ಸಿನ್ಸ್ ಲಿಮಿಟೆಡ್ ಕಂಪೆನಿ ಸೇರಿದ್ದರು.
ವ್ಯಾಪಕ ಸಂಶೋಧನಾ ಕಾರ್ಯಗಳ ಬಳಿಕ ಭಾರತ್ ಸೀರಮ್ಸ್ ಮತ್ತು ವ್ಯಾಕ್ಸಿನ್ ಲಿಮಿಟೆಡ್‍ನಲ್ಲಿ ಕೆಲಸ ಮಾಡುತ್ತಿದ್ದಾಗ ಆಂಬಿಸೋಮ್ ಔಷಧಿಯ ಸಾಮಾನ್ಯ ಆವೃತ್ತಿಯನ್ನು 2012ರಲ್ಲಿ ಗಂಗೊಳ್ಳಿ ಮೂಲದ ಬಾಂಡ್ಯ ಶ್ರೀಕಾಂತ್ ಪೈ ಮತ್ತು ಅವರ ತಂಡವು ಅಭಿವೃದ್ಧಿಪಡಿಸಿರುವುದು ಎಲ್ಲರ ಗಮನ ಸೆಳೆದಿದೆ.
ಲಿಪೊಸೊಮನ್ ಆಂಪೊಟೆರಿಸಿನ್ ಬಿ ಔಷಧದ ದಕ್ಷತೆ ಮತ್ತು ವಿಷತ್ವವನ್ನು ವ್ಯಾಪಕವಾಗಿ ಅಧ್ಯಯನ ಮಾಡಲಾಗಿದೆ ಮತ್ತು ಕಪ್ಪು ಶಿಲೀಂಧ್ರ ಸೋಂಕುಗಳಿಗೆ (ಬ್ಲ್ಯಾಕ್ ಫಂಗಸ್) ಚಿಕಿತ್ಸೆ ನೀಡಲು ವೈದ್ಯರು ಸೂಚಿಸುವ ಪ್ರಮುಖ ಉತ್ಪನ್ನವಾಗಿದೆ. ಈ ಉತ್ಪನ್ನದ ಬೆಲೆ 6000-7000 ರೂ.


ಸಾಂಪ್ರದಾಯಿಕ ಉತ್ಪನ್ನಕ್ಕೆ ಹೋಲಿಸಿದರೆ ಪ್ರಾಣಿಗಳ ಅಧ್ಯಯನದಲ್ಲಿ 20ಕ್ಕೂ ಹೆಚ್ಚು ಬಾರಿ ಸುರಕ್ಷತಾ ಪ್ರೊಫೈಲ್ ಹೊಂದಿರುವ ಆಂಪೊಟೆರಿಸಿನ್ ಬಿ ಲಿಪಿಡ್ ಕಾಂಪ್ಲೆಕ್ಸ್ (ಅಬೆಲ್ಸೆಟ್) ಎನ್ನುವ ಔಷಧಿಯನ್ನು ಸಹ ಅದೇ ತಂಡವು ಅಭಿವೃದ್ಧಿ ಪಡಿಸಿದೆ ಮತ್ತು ಸುಮಾರು ರೂ 3000-3500 ವೆಚ್ಚದಲ್ಲಿ ಲಭ್ಯವಿದೆ.


ಆಂಪೊಟೆರಿಸಿನ್ ಬಿ ಎಮಲ್ಷನ್ ಎಂಬ ಔಷಧಿ ಅಗ್ಗದ ದರದಲ್ಲಿ ಅಭಿವೃದ್ಧಿ ಪಡಿಸಲಾಗಿದ್ದು ಇದಕ್ಕಾಗಿ ಪೇಟೆಂಟ್ ಪಡೆಯಲಾಗಿದೆ. ಸಾಂಪ್ರದಾಯಿಕ ಉತ್ಪನ್ನಕ್ಕೆ ಹೋಲಿಸಿದರೆ ಈ ಉತ್ಪನ್ನದ ಬೆಲೆ ಸುಮಾರು ರೂ. 2000. ಇದು 100 ಪಟ್ಟು ಸುರಕ್ಷತಾ ಪೆÇ್ರಫೈಲ್ ಹೊಂದಿದೆ.


ಒಟ್ಟಾರೆಯಾಗಿ ಭಾರತ್ ಸೀರಮ್ಸ್ ಮತ್ತು ವ್ಯಾಕ್ಸಿನ್ ಲಿಮಿಟೆಡ್ ಸಂಸ್ಥೆಯ ಬಿ.ಶ್ರೀಕಾಂತ ಪೈ ನೇತೃತ್ವದ ಒಂದೇ ತಂಡವು ವಿಭಿನ್ನ ಪರಿಣಾಮಕಾರಿತ್ವ, ಸುರಕ್ಷತೆ ಮತ್ತು ವಿಷತ್ವ ಪ್ರೊಫೈಲ್‌ಗಳನ್ನು ಹೊಂದಿರುವ ಮೇಲೆ 4 ಉತ್ಪನ್ನಗಳನ್ನು ಅಭಿವೃದ್ಧಿಪಡಿಸಿದ್ದು, ಇದೀಗ ಈ ಉತ್ಪನ್ನಗಳು ರೋಗಿಗಳಿಗೆ ವರದಾನವಾಗಿ ಪರಿಣಮಿಸಿದೆ. ಬ್ಲ್ಯಾಕ್ ಫಂಗಸ್ ರೋಗಿಗಳಿಗೆ ಯಾವ ಉತ್ಪನ್ನ ಎನ್ನುವುದನ್ನು ವೈದ್ಯಕೀಯ ತಜ್ಞರೇ ನಿರ್ಧರಿಸುತ್ತಾರೆ.


ಭಾರತ್ ಸೀರಮ್ಸ್ ಎಂಡ್ ವ್ಯಾಕ್ಸಿನ್ಸ್ ಕಂಪೆನಿಯಿಂದ ನಿವೃತ್ತರಾದ ಬಳಿಕ ಬಿ.ಶ್ರೀಕಾಂತ ಪೈ ಸದ್ಯ ಮುಂಬೈನಲ್ಲಿ ವಿಶ್ರಾಂತ ಜೀವನ ಸಾಗಿಸುತ್ತಿದ್ದು, ಫ್ರೀಲ್ಯಾನ್ಸ್ ಕನ್ಸಲ್ಟೆಂಟ್ ಆಗಿ ದುಡಿಯುತ್ತಿದ್ದಾರೆ. ಫಾರ್ಮುಲೇಶನ್ಸ್‍ನಲ್ಲಿ ಪೇಟೆಂಟ್ ಪಡೆದ 16 ಸಂಶೋಧನೆಗಳನ್ನು ನಡೆಸಿರುವ ಇವರು ಈ ಕ್ಷೇತ್ರದಲ್ಲಿ ಸುಧೀರ್ಘ 35 ವರ್ಷ ಅನುಭವ ಹೊಂದಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!