Wednesday, April 24, 2024

ಕೋಟೇಶ್ವರ ವ್ಯ.ಸೇ.ಸಹಕಾರ ಸಂಘದಲ್ಲಿ ತೋನ್ಸೆ ರಘುರಾಮ ಹೆಗ್ಡೆಯವರಿಗೆ ನುಡಿನಮನ


ಕುಂದಾಪುರ: ಕೋಟೇಶ್ವರ ವ್ಯವಸಾಯ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿ ಸಭೆಯಲ್ಲಿ ಇತ್ತೀಚಿಗೆ ನಿಧನರಾದ ಸಂಘದ ಮಾಜಿ ಅಧ್ಯಕ್ಷರಾದ ತೋನ್ಸೆ ರಘುರಾಮ ಹೆಗ್ಡೆಯವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.


ತೋನ್ಸೆ ರಘುರಾಮ ಹೆಗ್ಡೆ ಹಿಂದಿನ ದಿನಗಳಲ್ಲಿ ಸಂಘದ ಅಭಿವೃದ್ಧಿಗಾಗಿ ದುಡಿದು ಸಹಕಾರ ಸಂಘದ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ವಹಿಸಿದ್ದರು. ಅವರ ಸೇವೆಯನ್ನು ಸ್ಮರಿಸಿ ಅವರಿಗೆ ನುಡಿನಮನ ಸಲ್ಲಿಸಲಾಯಿತು.


ಸಭೆಯಲ್ಲಿ ಕೋಟೇಶ್ವರ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಶರತ್ ಕುಮಾರ್ ಹೆಗ್ದೆ, ಉಪಾಧ್ಯಕ್ಷ ವಾದಿರಾಜ ತ್ವಾರ್ ಮತ್ತು ಆಡಳಿತ ಮಂಡಳಿ ಸರ್ವ ಸದಸ್ಯರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ವಿಶ್ವೇಶ್ವರ ಐತಾಳ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
21,600SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!