spot_img
Thursday, March 26, 2026
spot_img

ಎಮ್.ಎಸ್.ಮಂಜ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಂಡ್ಸೆ ಸ.ಮಾ.ಹಿ.ಪ್ರಾ.ಶಾಲೆಯ 400 ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ, ಪಠ್ಯ ಪುಸ್ತಕ ವಿತರಣೆ


ಕುಂದಾಪುರ: ಎಮ್.ಎಸ್.ಮಂಜ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆಯ ಎಲ್.ಕೆ.ಜಿಯಿಂದ 7ನೇ ತರಗತಿಯ ತನಕದ ವಿದ್ಯಾರ್ಥಿಗಳಿಗೆ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಕೊಡಮಾಡಿದ ನೋಟ್ ಪುಸ್ತಕ ಮತ್ತು ಪಠ್ಯ ಪುಸ್ತಕ ವಿತರಣೆ ಇತ್ತೀಚೆಗೆ ನಡೆಯಿತು.


ಪಠ್ಯ ಪುಸ್ತಕ, ನೋಟ್ ಪುಸ್ತಕ ವಿತರಿಸಿ ಮಾತನಾಡಿದ ಎಮ್.ಎಸ್.ಮಂಜ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಕೃಷ್ಣಮೂರ್ತಿ ಮಂಜರು, ಕೋವಿಡ್-೧೯ ನಂತಹ ಕಷ್ಟಕಾಲದಲ್ಲಿಯೂ ನಮ್ಮ ಶಾಲೆಯ 400 ಮಂದಿ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು, ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಇರುವುದರಲ್ಲಿ ಸ್ವಲ್ಪ ದಾನ ಮಾಡುವ ಮನದಾಸೆಯಿಂದ ಕಷ್ಟಕಾಲವಾದರೂ ನೀಡುತ್ತಿದ್ದೇನೆ ಎಂದರು.


ಶ್ರೀ ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ, ಗ್ರಾ.ಪಂ. ಅಧ್ಯಕ್ಷರಾದ ಉದಯ ಕುಮಾರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಈ ಶಾಲೆಗೆ ಕೃಷ್ಣಮೂರ್ತಿ ಮಂಜರ ಸಹಕಾರ ಶ್ಲಾಘನಾರ್ಹವಾದುದು. ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿಯೂ ನಮ್ಮ ಶಾಲೆಗೆ ಶ್ರೀ ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾಗಿ ಅದರ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುತ್ತಿರುವುದು ಮೆಚ್ಚುವಂತಹದ್ದು. ಇವರೊಂದಿಗೆ ಶಿಕ್ಷಣ ಇಲಾಖೆ ಸಹಕರಿಸಿದ್ದಲ್ಲಿ ಉತ್ತಮವಿತ್ತು ಎಂದರು.


ಶ್ರೀ ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಖಜಾಂಚಿ ಜಿ.ಶ್ರೀಧರ ಶೆಟ್ಟಿ ಮಾತನಾಡಿ, ಈ ಸರಕಾರಿ ಶಾಲೆಯ ಪ್ರಗತಿಗೆ ಟ್ರಸ್ಟ್ ಮತ್ತು ರೋಟರಿ ಸಂಸ್ಥೆ ನಿಮ್ಮೊಂದಿಗಿದೆ. ಶಾಲೆಗೆ ಯಾವುದೇ ಸಮಸ್ಯೆ ಎದುರಾದರೆ ಶಾಲೆಗಾಗಿ ಉಪವಾಸ ಸತ್ಯಾಗ್ರಹ ಮಾಡುವುದು ಅನಿವಾರ್ಯವಾದಲ್ಲಿ ಅದಕ್ಕೂ ಸಿದ್ಧ ಎಂದರು.


ವಂಡ್ಸೆ ಸಿ.ಆರ್.ಪಿ ನಾಗರಾಜ ಶೆಟ್ಟಿ, ಗ್ರಾ.ಪಂ.ಉಪಾಧ್ಯಕ್ಷೆ ಗೀತಾ ಅವಿನಾಶ್, ಗ್ರಾ.ಪಂ.ಸದಸ್ಯರಾದ ಗೋವರ್ಧನ ಜೋಗಿ, ಪ್ರಶಾಂತ ಪೂಜಾರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂದೇಶ್ ಶೆಟ್ಟಿ ಉಪಸ್ಥಿತರಿದ್ದರು.


ಶಾಲೆಯ ಮುಖ್ಯೋಪಾಧ್ಯಾಯ ಚಂದ್ರ ನಾಯ್ಕ ಸ್ವಾಗತಿಸಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಮಂಜುನಾಥ ಎ.ಜಿ. ವಂದಿಸಿದರು. ಸಹ ಶಿಕ್ಷಕ ಸದಾಶಿವ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!