spot_img
Thursday, March 26, 2026
spot_img

ಬಿಲ್ಲವ ಸಮಾಜ ಸೇವಾ ಸಂಘ : ಕುಂದಾಪುರದಲ್ಲಿ ಬೃಹತ್ ವಾಹನ ಜಾಥಾ


ಕುಂದಾಪುರ: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ, ಶ್ರೀ ನಾರಾಯಣ ಗುರು ಯುವಕ ಮಂಡಲ ಕುಂದಾಪುರ ಇವರಿಂದ 167ನೇ ಗುರು ಜಯಂತಿ ಪ್ರಯುಕ್ತ ಕುಂದಾಪುರದಲ್ಲಿ ಬೃಹತ್ ವಾಹನ ಜಾಥಾ ಭಾನುವಾರದಂದು ನಡೆಯಿತು. ಕುಂದಾಪುರದ ನಾರಾಯಣಗುರು ಕಲ್ಯಾಣಮಂಟಪದ ಎದುರು ಮಾಜಿ ಪುರಸಭಾ ಸದಸ್ಯ ಕಾಳಪ್ಪ ಪೂಜಾರಿ ಜಾಥಾಕ್ಕೆ ಚಾಲನೆ ನೀಡಿದ್ದು ಕುಂದಾಪುರ ಶಾಸ್ತ್ರೀ ವೃತ್ತ, ಚರ್ಚ್ ರಸ್ತೆ ಮೂಲಕವಾಗಿ ಸಾಗಿದ ಜಾಥಾ ಕೋಡಿ ಶ್ರೀ ಚಕ್ರೇಶ್ವರೀ ದೇವಸ್ಥಾನದಲ್ಲಿ ಸಂಪನ್ನಗೊಂಡಿತು.


ದೇವಸ್ಥಾನದ ಪ್ರಾಂಗಣದಲ್ಲಿ ನಾರಾಯಣಗುರು ಶ್ರೀಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ, ಶ್ರೀ ನಾರಾಯಣ ಗುರುಗಳು ಹೇಳಿದಂತೆ ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಯುತರಾಗಿರಬೇಕಿದೆ. ಹಳ್ಳಿಹಳ್ಳಿಗಳಲ್ಲೂ ಕೂಡ ನಾವು ವಿದ್ಯೆಯಲ್ಲಿ ಮುಂದಿದ್ದರೂ ಕೂಡ ಆದರೆ ರಾಜಕೀಯವಾಗಿ, ಆರ್ಥಿಕವಾಗಿ ಹಾಗೂ ಸಮಾಜಿಕ ಉದ್ದೇಶದಿಂದ ನಾವು ಸಂಘಟನಾತ್ಮಕವಾಗಿ ಸಮನ್ವಯ ಕೊರತೆಯಲ್ಲಿದ್ದೇವೆ. ಯುವ ಮುಖಂಡರು ಸಮಾಜ ಸಂಘಟಿಸುವಲ್ಲಿ ಗುರುಗಳು ಹಾಕಿಕೊಟ್ಟ ಮಾರ್ಗದರ್ಶನದಂತೆ ಮುನ್ನಡೆಯಬೇಕು. ಸಮುದಾಯದ ಸಂಘಟನೆ ಕೇವಲ ಸಾಮಾಜಿಕ ಜಾಲತಾಣಗಳಿಂದ ಇದು ಸಾಧ್ಯವಿಲ್ಲ ಬದಲಾಗಿ ರಾಜಕೀಯ ಶಕ್ತಿಯ ಅಗತ್ಯವಿದೆ ಎಂದರು.


ಬಿಲ್ಲವ ಯುವ ಮುಖಂಡ ಮಹೇಶ್ ಪೂಜಾರಿ ಹಳೆ‌ಅಳಿವೆ, ಕುಂದಾಪುರ ಶ್ರೀ ನಾರಾಯಣಗುರು ಯುವಕ ಮಂಡಲದ ಅಧ್ಯಕ್ಷ ಶ್ರೀನಾಥ್ ಕಡ್ಗಿಮನೆ, ಕಾರ್ಯಕ್ರಮ ಸಂಯೋಜಿಸಿದ ಬಿಲ್ಲವ ಹಿರಿಯ ಮುಖಂಡ ಶಂಕರ್ ಪೂಜಾರಿ ಕೋಡಿ, ಕೋಡಿ ಶ್ರೀ ಚಕ್ರೇಶ್ವರೀ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಗೋಪಾಲ ಪೂಜಾರಿ, ಬೈಂದೂರು ಬಿಲ್ಲವ ಸಂಘದ ಅಧ್ಯಕ್ಷ ಗಣೇಶ್ ಪೂಜಾರಿ, ಕೋಡಿ ಬಿಲ್ಲವ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ಬಿಲ್ಲವ ಸಂಘದ ಭಾಸ್ಕರ್ ವಿಠಲವಾಡಿ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!