spot_img
Thursday, March 26, 2026
spot_img

ಕೋಟ ಪಂಚವರ್ಣ ಯುವಕ ಮಂಡಲದ 24ನೇ ವರ್ಷದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಆಮಂತ್ರಣ ಪತ್ರಿಕೆ ಬಿಡುಗಡೆ

ಕೋಟ: ಸಂಘಟನೆಯಲ್ಲಿ ಶಕ್ತಿ ಇದೆ ಅವುಗಳು ಒಂದುಗೂಡಿ ಕಾರ್ಯನಿರ್ವಹಿಸಿದಾಗ ಶಕ್ತಿಯ ಪ್ರಕರತೆ ತೋರ್ಪಡಿಸುತ್ತದೆ ಎಂದು ಹಂಗಾರಕಟ್ಟೆಯ ಬಾಳೆಕುದ್ರು ಶ್ರೀ ಮಠದ ಶ್ರೀ ಶ್ರೀ ಶ್ರೀ ನೃಸಿಂಹಾಶ್ರಮ ಸ್ವಾಮಿಜೀ ಹೇಳಿದರು.

ಕೋಟದ ಪಂಚವರ್ಣ ಯುವಕ ಮಂಡಲದ 24ನೇ ವರ್ಷದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಆರ್ಶ್ರೀವಚನಗೈದು ಸಂಘಟನೆಗಳ ಮೂಲಕ ಸಮಾಜಕ್ಕೆ ತನ್ನನ್ನು ತಾನು ಅರ್ಪಣೆಗೊಳಿಸಿಕೊಳ್ಳಬೇಕು, ತನ್ನ ಜೀವಿತ ಅವಧಿಯ ಸಂಪಾದನೆಯಲ್ಲಿ ಸಾಮಾಜಿಕ ಕಾರ್ಯಕ್ಕೆ ವಿನಿಯೋಗಿಸುವ ಧರ್ಮಯುಕ್ತ ಮನೋಭಾವನೆ ಬೆಳೆಸಿಕೊಂಡಾಗ ಪ್ರತಿಫಲ ನಮ್ಮನ್ನು ಅರಿಸಿಕೊಂಡು ಬರುತ್ತದೆ. ಸಹಾಯ ಮಾಡುವ ಮನಸ್ಥಿತಿ ಎಲ್ಲವುದಕ್ಕಿಂತ ಶ್ರೇಷ್ಠವಾದದ್ದು ಅದನ್ನು ಬೆಳೆಸಿಕೊಳ್ಳವ ಮೂಲಕ ಸಮಾಜದ ಋಣವನ್ನು ತೀರಿಸಲು ಸಾಧ್ಯ, ಈ ನಿಟ್ಟಿನಲ್ಲಿ ಈ ಬಾರಿ ನೀವು ಆಯ್ಕೆ ಮಾಡಿಕೊಂಡ ವ್ಯಕ್ತಿ ಸಮಾಜಕ್ಕೆ ಅರ್ಪಣೆ ಮಾಡಿಕೊಂಡಿದ್ದಾನೆ ಇದು ಸಹ ಧನ್ಯತೆಯನ್ನು ಕಂಡಂತೆ ಅದು ನಿಮ್ಮ ಈ ಯುವಕ ಮಂಡಲದಿಂದ ಕಾಣಲು ಸಾಧ್ಯವಾಗಿ ಪರಿಸರ ಸ್ನೇಹಿಯಾಗಿ ಸಾಕಷ್ಟು ಸಾಮಾಜಮುಖಿ ಕಾರ್ಯವನ್ನು ಮಾಡುತ್ತಿರುವ ನವ ತರುಣನಂತಿರುವ ಈ ಯುವಕ ಮಂಡಲ ಸಾಧನಾ ಶಿಖರವನ್ನು ಏರಲಿ ಎಂದು ಹಾರೈಸಿದರು.

ಮುಖ್ಯ ಅತಿಥಿಯಾಗಿ ಕೋಟ ಸಹಕಾರಿ ವ್ಯವಸಾಯಕ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ ಸಂಘ ಕಾರ್ಯಾತತ್ಪರತೆ ಶ್ಲಾಘಿಸಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿಯ ಮಾಜಿ ಅಧ್ಯಕ್ಷ ಪ್ರತಾಪ್ ಶೆಟ್ಟಿ ಸಾಸ್ತಾನ,ರಂಗಸಂಪದ ಬಳಗ ಕೋಟ ಇದರ ಅಧ್ಯಕ್ಷ ಕೆ.ರಾಘವೇಂದ್ರ ತುಂಗ,ಪಂಚವರ್ಣ ಯುವಕ ಮಂಡಲದ ಗೌರವ ಸಲಹಾಸಮಿತಿಯ ಸದಸ್ಯ ಕೆ.ಉಮೇಶ್ ಪ್ರಭು,ಪಂಚವರ್ಣ ಯುವಕ ಮಂಡಲದ ಸಂಚಾಲಕ ಅಜಿತ್ ಆಚಾರ್ಯ, ಸಂಘಟನಾಕಾರ್ಯದರ್ಶಿ ಗಿರೀಶ್ ಆಚಾರ್ಯ, ಗಿಳಿಯಾರು ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಸುರೇಶ್ ಗಿಳಿಯಾರು,ಪಂಚವರ್ಣ ಸ್ಥಾಪಕ ನರಸಿಂಹ ಗಾಣಿಗ,ಪ್ರಮುಖರಾದ ರವೀಂದ್ರ ಜೋಗಿ,ಸುಧೀರ್ ಕೊಯ್ಕೂರ್, ಕಾರ್ತಿಕ್ ಎನ್,ಭಾರ್ಗವ ಗಿಳಿಯಾರು ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪಂಚವರ್ಣದ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಸಂಯೋಜಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!