spot_img
Thursday, May 7, 2026
spot_img

ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ: ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಎನ್.ಮಂಜಯ್ಯ ಶೆಟ್ಟಿ ಅಧಿಕಾರ ಸ್ವೀಕಾರ

ಕುಂದಾಪುರ, ನ.೧: ದೇವಸ್ಥಾನಗಳು ನೆಮ್ಮದಿಯ ಕೇಂದ್ರಗಳು. ಅಲ್ಲಿಗೆ ಬರುವ ಭಕ್ತಾದಿಗಳನ್ನು ಸರಿಯಾಗಿ ನೋಡಿಕೊಳ್ಳಬೇಕು. ಆಡಳಿತ ಮಂಡಳಿ, ಅರ್ಚಕರು, ಸಿಬ್ಬಂದಿಗಳ ಶ್ರಮದಿಂದ ದೇಗುಲ ಅಭಿವೃದ್ದಿ ಸಾಧ್ಯ. ಎಲ್ಲಾ ಭಕ್ತರನ್ನು ಒಂದೇ ರೀತಿ ನೋಡಿಕೊಳ್ಳಬೇಕು. ಬಡವರಿಗೊಂದು ರೀತಿ ಶ್ರೀಮಂತರಿಗೊಂದು ರೀತಿ ಮಾಡಬಾರದು. ಸರಿಯಾದ ಪೂಜೆ ಪುನಸ್ಕಾರಗಳಿಂದ ದೇಗುಲದ ಘನತೆ ಹೆಚ್ಚುತ್ತದೆ. ಇದರಲ್ಲಿ ಅರ್ಚಕರ ಪಾತ್ರ ಬಹಳಷ್ಟಿದೆ. ಸೌಕೂರು ಸಾನಿಧ್ಯ ವಿಶೇಷತೆ ಯಿಂದ ಕೂಡಿದೆ. ಇದರ ಶಕ್ತಿ ಇನ್ನಷ್ಟು ಹೆಚ್ಚಲಿ ಆಡಳಿತ ಮಂಡಳಿ ಒಳ್ಳೆಯ ಕೆಲಸ ಮಾಡಲಿ ಎಂದು ಕೊಲ್ಲೂರು ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರಾದ ಬಸ್ರೂರು ಅಪ್ಪಣ್ಣ ಹೆಗ್ಡೆ ಹೇಳಿದರು.

ಅವರು ಇಂದು ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಎನ್. ಮಂಜಯ್ಯ ಶೆಟ್ಟಿಯವರ ಅಭಿನಂದನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಎನ್. ಮಂಜಯ್ಯ ಶೆಟ್ಟಿ ಸಬ್ಲಾಡಿ ಮಾತನಾಡಿ, ದೇಗುಲವನ್ನು ಅಭಿವೃದ್ದಿ ಪಡಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಭಕ್ತರಿಗೆ ವ್ಯವಸ್ಥಿತವಾಗಿ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗುವುದು. ದೇಗುಲದ ಅಭಿವೃದ್ದಿಪಡಿಸಲು ಆಡಳಿತ ಮಂಡಳಿ ಕೆಲಸ ಮಾಡಲಿದೆ ಎಂದರು.

ಆರಂಭದಲ್ಲಿ ದೇಗುಲದ ಪ್ರಧಾನ ಅರ್ಚಕರಾದ ಅನಂತ ಅಡಿಗ ಆಶೀರ್ವಚನ ನೀಡಿದರು. ಮುಖ್ಯ ಅತಿಥಿಗಳಾಗಿ ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಡಾ. ಅತುಲ್‌ಕುಮಾರ್ ಶೆಟ್ಟಿ, ಮಾಜಿ ಧರ್ಮದರ್ಶಿಗಳಾದ ವಂಡಬಳ್ಳಿ ಜಯರಾಮ ಶೆಟ್ಟಿ, ಬಾಂಡ್ಯ ಸುಬ್ಬಣ್ಣ ಶೆಟ್ಟಿ ಆಗಮಿಸಿದ್ದರು. ದೇಗುಲದ ಆಡಳಿತಾಧಿಕಾರಿ ರಘುರಾಮ ಶೆಟ್ಟಿ ಶುಭ ಕೋರಿ ಮಾತನಾಡಿದರು.

ವೇದಿಕೆಯಲ್ಲಿ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಪ್ರಧಾನ ಅರ್ಚಕರಾದ ಅನಂತ ಅಡಿಗ, ಜಯರಾಮ ಶೆಟ್ಟಿ ಕಾವ್ರಾಡಿ, ಕೆ. ಸುಬ್ಬಣ್ಣ ಶೆಟ್ಟಿ ಕೆಂಚನೂರು, ಉಮೇಶ ಮೊಗವೀರ ಕಂಡ್ಲೂರು, ಜಿ. ಶೇಖರ ಪೂಜಾರಿ ಗುಲ್ವಾಡಿ, ಶ್ರೀಮತಿ ರೀತಾ ದೇವಾಡಿಗ ಸೌಕೂರು, ಶ್ರೀಮತಿ ಆಶಾ ನೇರಳಕಟ್ಟೆ, ಕುಷ್ಟ ಗುಲ್ವಾಡಿ ಉಪಸ್ಥಿರಿದ್ದರು

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!