Sunday, September 8, 2024

ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಮಹಾಸಭೆ: ರೂ. 63.62 ಲಾಭ-ಶೇ. 20 ಡಿವಿಡೆಂಡ್

ಮಂಗಳೂರು : ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಸಂಘಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರ ಆರ್ಥಿಕ ಶಕ್ತಿಯಾಗಿ 1931ರಲ್ಲಿ ಅಸ್ತಿತ್ವಕ್ಕೆ ಬಂದಿರುವ  ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘವು ಕೋವಿಡ್ -19ರ ಸಂಕಷ್ಟ ಸಂದರ್ಭದಲ್ಲೂ ಸದಸ್ಯರೆಲ್ಲರ ಸಂಪೂರ್ಣ ಸಹಕಾರದಿಂದ ಉತ್ತಮ ಪ್ರಗತಿಯನ್ನು ಕಂಡಿದೆ.  2020-21ನೇ ಸಾಲಿನಲ್ಲಿ ಸಂಘವು ರೂ.63.62 ಲಕ್ಷ ಲಾಭ ಗಳಿಸಿ , ತನ್ನ ಸದಸ್ಯರಿಗೆ ಶೇ.20 ಡಿವಿಡೆಂಡ್ ನೀಡಿದೆ ಎಂದು ಸಂಘದ ಅಧ್ಯಕ್ಷರಾದ ಎಸ್. ಜಗದೀಶ್ಚಂದ್ರ ಅಂಚನ್  ತಿಳಿಸಿದ್ದಾರೆ.

ಅವರು ನಗರದ ಕೊಡಿಯಾಲ್ ಬೈಲ್ ಪಿವಿಎಸ್ ಕಲಾಕುಂಜದ ಬಳಿ ಇರುವ ಸಂಘದ ಪ್ರಧಾನ ಕಛೇರಿಯ  ಸಪ್ತವರ್ಣ ಸಭಾಂಗಣದಲ್ಲಿ ಶನಿವಾರ ನಡೆದ 90ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರೂ.110.10 ಕೋಟಿ ವ್ಯವಹಾರ:
ಸಹಕಾರ ಸಂಘಗಳ ನೌಕರ ಸದಸ್ಯರುಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಹಾಗೂ ಠೇವಣಿಗಳಿಗೆ ಆಕರ್ಷಕ ಬಡ್ಡಿಯನ್ನು ನೀಡಿಯೂ ಸಂಘವು ವರದಿ ವರ್ಷದಲ್ಲಿ  ಅಧಿಕ ಲಾಭವನ್ನು ಗಳಿಸಿದೆ . ಸಂಘವು 1095 ಮಂದಿ  ಸದಸ್ಯರನ್ನು  ಹೊಂದಿದೆ . ವರದಿ ವರ್ಷದಲ್ಲಿ ಸಂಘವು ರೂ.34.40 ಲಕ್ಷ ಪಾಲು ಬಂಡವಾಳವನ್ನು ಹೊಂದಿದ್ದು ,  ರೂ. 3.42 ಕೋಟಿ ವಿವಿಧ ನಿಧಿಗಳನ್ನು ಹೊಂದಿದೆ . ಠೇವಣಿ ಸಂಗ್ರಹಣೆಯಲ್ಲೂ ಸಂಘವು ಗಮನಾರ್ಹ ಸಾಧನೆಗೈದಿದೆ. ಕಳೆದ ವರ್ಷಾಂತ್ಯಕ್ಕೆ ಠೇವಣಿ  ರೂ.50.83 ಕೋಟಿಯಿಂದ ವರದಿ ವರ್ಷದಲ್ಲಿ ರೂ .61.56 ಕೋಟಿಗೆ ಏರಿಕೆಯಾಗಿದೆ .  ಸಾಲ ಮುಂಗಡದಲ್ಲೂ ಏರಿಕೆಯಾಗಿದ್ದು ರೂ.41.06 ಕೋಟಿಯಿಂದ ರೂ. 48.54 ಕೋಟಿಗೆ ಹೆಚ್ಚಳವಾಗಿದೆ. ಸಂಘದ ಒಟ್ಟು ವ್ಯವಹಾರ ರೂ. 110.10 ಕೋಟಿಗೆ ಏರಿಕೆಯಾಗಿದೆ ಎಂದು ಜಗದೀಶ್ಚಂದ್ರ ಅಂಚನ್ ತಿಳಿಸಿದರು

ಸಂಘವು ನಗರದ ಕೊಡಿಯಾಲ್ ಬೈಲ್ ಪಿವಿಎಸ್  ಕಲಾಕುಂಜದ ಬಳಿ 10 ಸೆಂಟ್ಸ್ ಸ್ಥಳದಲ್ಲಿ ಎರಡು ಮಹಡಿಯ ‘ಉನ್ನತಿ ‘ ಸ್ವಂತ ಕಟ್ಟಡವನ್ನು ಹೊಂದಿದ್ದು,  ಈ ಸುಸಜ್ಜಿತ  ಕಟ್ಟಡದಲ್ಲಿ ಕೇಂದ್ರ ಕಚೇರಿ , ಆಡಳಿತ ಮಂಡಳಿ ಸಭಾಂಗಣ ಸೇರಿದಂತೆ ಸಪ್ತವರ್ಣ ಸಭಾಭವನವೂ ಇದೆ .

ನಾಲ್ಕು ಶಾಖೆಗಳು:
ವ್ಯವಹಾರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಂಘವು ನಾಲ್ಕು ಶಾಖೆಗಳನ್ನು ಹೊಂದಿದ್ದು, ಈ ಪೈಕಿ ಮಂಗಳೂರುನಲ್ಲಿ ಎರಡು , ಉಡುಪಿ ಹಾಗೂ ಪುತ್ತೂರುನಲ್ಲಿ ತಲಾ ಒಂದು ಶಾಖೆ ಕಾರ್ಯನಿರ್ವಹಿಸುತ್ತಿದೆ . ಈ ಎಲ್ಲಾ ಶಾಖೆಗಳು ಸದಸ್ಯರೆಲ್ಲರ ಸಹಕಾರ ಹಾಗೂ ಸಿಬ್ಬಂದಿಗಳ ಪ್ರಾಮಾಣಿಕ ಸೇವೆಯಿಂದ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ . ಮುಂದೆ ತಾಲೂಕುವಾರು ಶಾಖೆಗಳನ್ನು ತೆರೆಯಲು ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು.

ಸತತ 4ನೇ ಬಾರಿ ಎಸ್ ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿ:
ಸಂಘದ ಪ್ರಗತಿಯನ್ನು ಗುರುತಿಸಿ ಎಸ್ ಸಿಡಿಸಿಸಿ ಬ್ಯಾಂಕ್  ಕಳೆದ ಮೂರು ವರ್ಷಗಳಿಂದ (2017-18 , 2018-19 , 2019-20) ಸಾಧನಾ ಪ್ರಶಸ್ತಿಯನ್ನು  ನೀಡುತ್ತಿದೆ. 2020-21ನೇ ಸಾಲಿನಲ್ಲೂ ಸಂಘವು ಎಸ್ ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿಗೆ ಪಾತ್ರವಾಗಿದ್ದು , ಡಿಸೆಂಬರ್-14ರಂದು ನಡೆಯುವ ಬ್ಯಾಂಕಿನ ಮಹಾಸಭೆಯಲ್ಲಿ ಸಂಘವು ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಸತತ ನಾಲ್ಕನೇ ಬಾರಿಗೆ ಸ್ವೀಕರಿಸಲಿದೆ ಎಂದು ಅವರು ತಿಳಿಸಿದರು.

ಡಾ.ಎಂಎನ್ಆರ್ ಮಾರ್ಗದರ್ಶಕರು :
ಸಂಘವು ಇಂದು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯಲು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ಸಹಕಾರ ರಂಗದ ಅದ್ವೀತಿಯ ನಾಯಕರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಮಾರ್ಗದರ್ಶನ ಕಾರಣವಾಗಿದ್ದು ಅವರಿಗೆ ಮಹಾಸಭೆಯಲ್ಲಿ ಕೃತಜ್ಞತೆಯನ್ನು ಸಲ್ಲಿಸಲಾಯಿತು.

ಸನ್ಮಾನ:
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಶ್ರೀ ವಿಶ್ವನಾಥ ಕೆ.ಟಿ. ಇವರು ಸಾಂಸ್ಕೃತಿಕ ಸಂಘಟನೆಗಾಗಿ ಗೌರವ  ಡಾಕ್ಟರೇಟ್ ಪದವಿ ಪಡೆದಿರುವುದನ್ನು ಗುರುತಿಸಿ ಮಹಾಸಭೆಯಲ್ಲಿ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಕಾರ್ಯಕ್ರಮವು ಎಸ್ ಸಿಡಿಸಿಸಿ ಬ್ಯಾಂಕಿನ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಶ್ರೀ ರವೀಂದ್ರ ಬಿ ಇವರ ಉಪಸ್ಥಿತಿಯಲ್ಲಿ ನಡೆಯಿತು.

ಮಹಾಸಭೆಯಲ್ಲಿ  ಸಂಘದ ಉಪಾಧ್ಯಕ್ಷರಾದ  ದಿವಾಕರ ಶೆಟ್ಟಿ ,  ನಿರ್ದೇಶಕರುಗಳಾದ  ಪುಷ್ಪರಾಜ್ ಎಂ.ಎಸ್.   ರಾಘವ ಆರ್ . ಉಚ್ಚಿಲ್,   ಶ್ರೀಮತಿ ಶುಭಲಕ್ಷ್ಮಿ ವಿ.ರೈ ,  ವಿಶ್ವೇಶ್ವರ ಐತಾಳ್ , ಜಯಪ್ರಕಾಶ್ ರೈ ಸಿ, ವಿಶ್ವನಾಥ ಕೆ ಟಿ,   ಶಿವಾನಂದ ಪಿ,  ಗಿರಿಧರ್ ,  ಅರುಣ್ ಕುಮಾರ್,  ವಿಶ್ವನಾಥ್ ಅಮೀನ್ , ಮೋಹನ್ ಎನ್  ,  ಶ್ರೀಮತಿ ಚಂದ್ರಕಲಾ , ಶ್ರೀಮತಿ ಗೀತಾಕ್ಷಿ  ಉಪಸ್ಥಿತರಿದ್ದರು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸತೀಶ್ ಪೂಜಾರಿ ವರದಿ ಮಂಡಿಸಿದರು. ಉಪಾಧ್ಯಕ್ಷರಾದ  ದಿವಾಕರ ಶೆಟ್ಟಿ  ವಂದಿಸಿದರು.  

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!