Sunday, September 8, 2024

ಅಗಲಿದ ಯೋಧರಿಗೆ ದೀಪ ನಮನ

ಬೈಂದೂರು: ಇತ್ತೀಚಿಗೆ ಹೆಲಿಕಾಪ್ಟರ್ ದುರ್ಘಟನೆಯಲ್ಲಿ ದುರ್ಮರಣಕ್ಕೀಡಾದ ಜನರಲ್ ಬಿಪಿನ್ ರಾವತ್ ಮತ್ತು ಇತರ 13 ವೀರ ಯೋಧರ ಆತ್ಮಕ್ಕೆ ಸದ್ಗತಿಗಾಗಿ ಪ್ರಾರ್ಥಿಸಿ, ನಾವುಂದ ಲಯನ್ಸ್ ಕ್ಲಬ್‌ನ ಅಧ್ಯಕ್ಷ ನರಸಿಂಹ ದೇವಾಡಿಗರ ನೇತೃತ್ವದಲ್ಲಿ ಭಾನುವಾರ ದೀಪ ನಮನ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಉದ್ಯಮಿ ಜಗದೀಶ ಶೆಟ್ಟಿ ಕುದ್ರುಗೋಡು, ನಾವುಂದ ಲಯನ್ಸ್ ಸ್ಥಾಪಕಾಧ್ಯಕ್ಷ ವಕ್ವಾಡಿ ಭಾಸ್ಕರ ಶೆಟ್ಟಿ, ಕಾರ್ಯದರ್ಶಿ ರಾಜು ಬಿ. ದೇವಾಡಿಗ, ಖಜಾಂಚಿ ಕೃಷ್ಣಾನಂದ ಕಾಮತ್, ಪರಿಸರದ ರೈತಾಪಿ ಬಾಂಧವರು ಹಾಗೂ ಲಯನ್ಸ್‌ನ ಸದಸ್ಯರು ಇದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!