Sunday, September 8, 2024

ರಸ್ತೆ ಅಪಘಾತದಲ್ಲಿ ಪ್ರಸಿದ್ಧ ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ನಿಧನ

ಉಡುಪಿ: ಗುರುವಾರ ನಸುಕಿನ ವೇಳೆ ಮೂಡುಬಿದಿರೆಯ ಗಂಟಾಲಕಟ್ಟೆ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹಿರಿಯಡ್ಕ ಮೇಳದ ಕಲಾವಿದ ವೇಣೂರು ವಾಮನ ಕುಮಾರ್ (47ವ) ಅವರು ಅಸುನೀಗಿದ್ದಾರೆ.

ಬುಧವಾರದ ಆಟ ಮುಗಿಸಿ ಬೆಳಗಿನ ಜಾವ ಬೈಕಿನಲ್ಲಿ ಬರುತ್ತಿದ್ದ ಅವರಿಗೆ ಮಾರುತಿ ಓಮ್ನಿಯೊಂದು ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ.

ಸುಮಾರು 30 ವರ್ಷಗಳಿಂದ ಯಕ್ಷಗಾನ ರಂಗದಲ್ಲಿ ಕಲಾವಿದರಾಗಿದ್ದು, ಇತ್ತೀಚೆಗೆ ಹಿರಿಯಡ್ಕ ಮೇಳದ ವ್ಯವಸ್ಥಾಪಕರಾಗಿ ಮೇಳವನ್ನು ಮುನ್ನಡೆಸುತ್ತಿದ್ದರು. ತೆಂಕುತಿಟ್ಟಿನ ಪ್ರಸಿದ್ಧ ಕಲಾವಿದರಾಗಿ ಮೂಡಿಬಂದಿರುವ ಇವರು, ಪೌರಾಣಿಕ ಮತ್ತು ಸಾಮಾಜಿಕ ಪ್ರಸಂಗಗಳಲ್ಲಿಯೂ ತಮ್ಮದೇಯಾದ ಛಾಪು ಮೂಡಿಸಿದ್ದರು.
ಇವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!