spot_img
Monday, March 23, 2026
spot_img

ಮರವಂತೆ: ‘ಮನೆಮನೆಗೆ ಉದ್ಯೋಗ ಖಾತರಿ ವಿಶೇಷ ಅಭಿಯಾನ ರಥ’ಕ್ಕೆ ಚಾಲನೆ

ಬೈಂದೂರು, ಜ.20: ಕೊರೊನಾ ಸಾಂಕ್ರಾಮಿಕದ ಅವಧಿಯಲ್ಲಿ ರೈತರು, ಕೂಲಿಕಾರರು ದುಡಿಮೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದರು. ಆಗ ಅವರ ಕೈಹಿಡಿದದ್ದು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಎಂದು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು.

ಉಡುಪಿ ಜಿಲ್ಲಾ ಪಂಚಾಯಿತಿ ಮತ್ತು ಬೈಂದೂರು ತಾಲ್ಲೂಕು ಪಂಚಾಯಿತಿ ಆಯೋಜಿಸಿರುವ ಮನೆಮನೆಗೆ ಉದ್ಯೋಗ ಖಾತರಿ ವಿಶೇಷ ಅಭಿಯಾನ ರಥ’ಕ್ಕೆ ಬಿ. ಎಂ. ಸುಕುಮಾರ ಶೆಟ್ಟಿ ಗುರುವಾರ ಮರವಂತೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಚಾಲನೆ ನೀಡಿ ಸಂಬಂಧಿಸಿದ ಮಾಹಿತಿ ಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಕೊರೊನಾ ಹಿಂದೆ ಸರಿಯಿತು ಎಂದುಕೊಂಡ ಜನರು ದುಡಿಮೆಗೆ ಮುಂದಾಗುತ್ತಿದ್ದಂತೆ ಇದೀಗ ಕೋವಿಡ್ ಮೂರನೆ ಅಲೆ ಎಲ್ಲರನ್ನು ಹೈರಾಣಗೊಳಿಸುತ್ತಿದೆ. ಈಗ ಉದ್ಯೋಗ ಖಾತರಿ ಯೋಜನೆಯ ಮಾಹಿತಿಯನ್ನು ಮನೆಮನೆಗೆ ತಲುಪಿಸಿ ದುಡಿಯುವ ವರ್ಗವನ್ನು ಗರಿಷ್ಠ ಪ್ರಮಾಣದಲ್ಲಿ ಇದರಲ್ಲಿ ತೊಡಗಿಸುವ ಅಗತ್ಯವಿದೆ. ಆಡಳಿತದ ಈ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಅವರು ಹಾರೈಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಮಂಜುನಾಥ ಶೆಟ್ಟಿ ಸ್ವಾಗತಿಸಿ, ಅಭಿಯಾನದ ರಥವು ತಾಲ್ಲೂಕಿನ ಎಲ್ಲ ಗ್ರಾಮಗಳಲ್ಲಿ ಸಂಚರಿಸಿ ಜನರಿಗೆ ಯೋಜನೆಯ ವಿಸ್ತೃತ ಮಾಹಿತಿ ನೀಡಲಿದೆ. ಇದರಿಂದ ಅಧಿಕ ಜನರು ಇದರ ಲಾಭ ಪಡೆಯುವರು ಎಂದು ಹೇಳಿದರು.

ಶಾಸಕರು ಇದೇ ವೇಳೆ ಯೋಜನೆಯ ಮಾಹಿತಿ ಪತ್ರವನ್ನು ಬಿಡುಗಡೆಗೊಳಿಸಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭಾರತಿ ಎಸ್, ಮರವಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ, ಉಪಾಧ್ಯಕ್ಷ ಲೋಕೇಶ ಖಾರ್ವಿ, ಸದಸ್ಯರು, ಸಿಬ್ಬಂದಿ, ತಾಂತ್ರಿಕ ಅಧಿಕಾರಿ ಶ್ರೀಕುಮಾರ್ ಉಪಸ್ಥಿತರಿದ್ದರು.
ಮರವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಿಯಾಜ್ ಅಹಮದ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!